ಮೇ 1: ದೇರಳಕಟ್ಟೆಯಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಜನ್ ಕಾನ್ಫರೆನ್ಸ್
Update: 2016-04-26 18:47 GMT
ಉಳ್ಳಾಲ, ಎ.26: ಎಸ್ಸೆಸ್ಸೆಫ್ ಉಳ್ಳಾಲ ಡಿವಿಜನ್ ವತಿಯಿಂದ ‘ಮರಳಿ ಬಾ ಪರಂಪರೆ’ಗೆ ಎಂಬ ಪ್ರಮೇಯದೊಂದಿಗೆ ಮೇ 1ರ ಅಪರಾಹ್ನ 3 ಗಂಟೆಗೆ ದೇರಳಕಟ್ಟೆಯ ಹೆರಿಟೇಜ್ ಸ್ಕ್ವೇರ್ ಸಿಟಿ ಗ್ರೌಂಡ್ನಲ್ಲಿ ಡಿವಿಜನ್ ಕಾನ್ಫರೆನ್ಸ್ ನಡೆಯಲಿದೆ.
ಉಳ್ಳಾಲ ಡಿವಿಜನ್ ಅಧ್ಯಕ್ಷ ಉಮರ್ ಅಹ್ಸನಿ ಇನೋಳಿ ಅಧ್ಯಕ್ಷತೆ ವಹಿಸಲಿದ್ದು, ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ರ ದುಆದೊಂದಿಗೆ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಜಂಇಯತ್ತುಲ್ ಉಲಮಾ ಅಧ್ಯಕ್ಷ ಹಾಗೂ ಕೇಂದ್ರ ಮುಶಾವರ ಸದಸ್ಯ ಶೈಖುನಾ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಕೆ.ಎಂ. ಸಿದ್ದೀಕ್ ಮೋಂಟುಗೋಳಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಎಸ್ವೈಎಸ್ ಕೇರಳ ರಾಜ್ಯ ಉಪಾಧ್ಯಕ್ಷ ಕೂಟುಂಬಾರ ಅಬ್ದುರ್ರಹ್ಮಾನ್ ದಾರಿಮಿ ಮುಖ್ಯ ಪ್ರಭಾಷಣವನ್ನು ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.