ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2016-04-28 18:24 GMT

ಕುಂದಾಪುರ, ಎ.28: ಅನಾರೋಗ್ಯದಿಂದ ಬಳಲುತ್ತಿದ್ದ ಕೋಟೇಶ್ವರದ ಬೋನಿಪಾಸ ಪಾಸನ್ನ (54) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಹೆಮ್ಮಾಡಿ ಗ್ರಾಮದ ಜಾಲಾಡಿ ಹೊಸಕಳಿ ಎಂಬಲ್ಲಿ ವಾರಾಹಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಎ.22ರಂದು ಮನೆಯಿಂದ ಹೋದವರು ನಾಪತ್ತೆಯಾಗಿದ್ದರು. ಎ.28ರಂದು ಬೆಳಗ್ಗೆ ಇವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಪಿಟ್ಸ್ ಹಾಗೂ ಪ್ಯಾರಲಿಸಿಸ್ ಕಾಯಿಲೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಗೊಳ್ಳಿ: ಅನಾರೋಗ್ಯ ಪೀಡಿತ ಪತಿಯಿಂದ ಮಾನಸಿಕವಾಗಿ ನೊಂದ ಮರವಂತೆಯ ರವೀಂದ್ರ ಎಂಬವರ ಪತ್ನಿ ಜಯಂತಿ ಎ.27ರಂದು ಸಂಜೆ ವೇಳೆ ಮನೆ ಸಮೀಪದ ಶೇಡ್‌ನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News