ಬಾಳಿಗಾ ಹತ್ಯೆ ಪ್ರಕರಣ: ಮೇ 2ರಂದು ಕಮಿಷನರ್ ಕಚೇರಿಗೆ ಪಾದಯಾತ್ರೆ

Update: 2016-04-29 18:19 GMT



ಮಂಗಳೂರು, ಎ.29: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ತನಿಖೆ ಕುಂಠಿತಗೊಂಡಿರುವುದನ್ನು ಖಂಡಿಸಿ ಹಾಗೂ ಕೊಲೆಯ ರೂವಾರಿ ನಮೋ ಬ್ರಿಗೇಡ್ ಸ್ಥಾಪಕ ನರೇಶ್ ಶೆಣೈನನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಮಂಗಳೂರಿನ ವಿದ್ಯಾರ್ಥಿ, ಯುವಜನ, ದಲಿತ, ಮಹಿಳಾ, ನಾಗರಿಕ ಸಂಘಟನೆಗಳ ಜಂಟಿ ವೇದಿಕೆ ದೇಶಪ್ರೇಮಿ ಸಂಘಟನೆಗಳ ಒಕ್ಕೂಟ ಮೇ 2ರಂದು ಸಂಜೆ 4 ಗಂಟೆಗೆ ಬಾಳಿಗಾರ ನಿವಾಸದಿಂದ ಪೊಲೀಸ್ ಕಮಿಷನರ್ ಕಚೇರಿಯವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ.
ನರೇಶ್ ಶೆಣೈ ಪೊಲೀಸರ ಹಿಡಿತದಿಂದ ತಪ್ಪಿಸಿಕೊಳ್ಳುತ್ತಿ ರುವುದರ ಹಿಂದೆ ಪ್ರಭಾವಿ ಶಕ್ತಿಗಳ ಕೈವಾಡವಿರುವುದು ಸ್ಪಷ್ಟವಾಗಿದೆ. ನರೇಶ್ ಶೆಣೈ ಸಹಿತ ಬಾಳಿಗಾ ಕೊಲೆಯ ಎಲ್ಲಾ ಆರೋಪಿಗಳ ಬಂಧನವಾಗದಿದ್ದಲ್ಲಿ ಪಾದಯಾತ್ರೆಯ ನಂತರ ಹೋರಾಟ ಇನ್ನಷ್ಟು ತೀವ್ರಗೊಳಿಸುವುದಾಗಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಸಂಚಾಲಕ ಸಂತೋಷ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News