ಬಸ್‌ನಲ್ಲಿ ವಿದೇಶಿ ಮದ್ಯ ಸಾಗಿಸುತ್ತಿದ್ದ ಯುವಕನ ಬಂಧನ

Update: 2016-05-02 11:39 GMT

ಮಂಜೇಶ್ವರ, ಮೇ 2: : ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ವಿದೇಶಿ ಮದ್ಯ ಸಾಗಿಸುತ್ತಿದ್ದ ಯುವಕನೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಳ್ಳಾರಿ ನಿವಾಸಿ ನಾಗರಾಜ್(36) ಎಂದು ಗುರುತಿಸಲಾಗಿದೆ. ಈತನ ಬಳಿಯಿದ್ದ 180 ಮಿ.ಲೀನ 24 ಪ್ಯಾಕೆಟ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಮದ್ಯವನ್ನು ಕಾಸರಗೋಡಿನ ಚೆರ್ಕಳಕ್ಕೆ ಕೊಂಡೊಯ್ಯುತ್ತಿದ್ದೆ ಎಂದು ಬಂಧಿತ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News