ವಿನಾಯಕ ಬಾಳಿಗ ಹತ್ಯಾ ಪ್ರಕರಣ: ತಪ್ಪು ಸುದ್ದಿ ಪ್ರಕಟಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮನವಿ

Update: 2016-05-09 14:39 GMT

ಮಂಗಳೂರು, ಮೇ 9: ವಿನಾಯಕ್ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾಶೀ ಮಠಾಧೀಶರ ಆಪ್ತ ಕಾರ್ಯದರ್ಶಿ ವಿಶ್ವನಾಥ್ ಭಟ್ ಎಂಬವರನ್ನು ಬಂಧಿಸಲಾಗಿದೆ ಎಂದು ಸುಳ್ಳು ಸುದ್ದಿಗಳನ್ನು ಪತ್ರಿಕೆಗಳು ಪ್ರಕಟಿಸಿದ್ದು ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಶೀ ಮಠದ ಬೆಂಗಳೂರು ಶಾಖೆಯ ಕಾರ್ಯದರ್ಶಿ ನಾರಾಯಣ ಶೆಣೈ ನೇತೃತ್ವದಲ್ಲಿ ಇಂದು ಮಂಗಳೂರು ಪೊಲೀಸ್ ಕಮಿಷನರ್‌ರಿಗೆ ಮನವಿಯನ್ನು ಸಲ್ಲಿಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ವಿಚಾರಣೆ ನಡೆಯುತ್ತಿದೆ. ಆದರೆ ಪತ್ರಿಕೆಗಳು ಈ ಪ್ರಕರಣದಲ್ಲಿ ವಿಶ್ವನಾಥ್ ಭಟ್‌ರನ್ನು ಬಂಧಿಸಲಾಗಿದೆ ಎಂದು ವರದಿ ಮಾಡಿದ್ದವು. ಇದು ಸುಳ್ಳು ಸುದ್ದಿಯಾಗಿದ್ದು ಇಂತಹ ತಪ್ಪು ಸುದ್ದಿಗಳು ಹೆಚ್ಚಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವುದರಿಂದ ಜಿಎಸ್‌ಬಿ ಸಮುದಾಯಕ್ಕೆ ಅಘಾತವುಂಟಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

 ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್, ಈ ಬಗ್ಗೆ ಕಾನೂನು ಸಲಹೆ ತೆಗೆದುಕೊಂಡು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News