ರಿಕ್ಷಾಗಳ ಮಧ್ಯೆ ಢಿಕ್ಕಿ: ನಾಲ್ವರಿಗೆ ಗಾಯ; ಓರ್ವ ಗಂಭೀರ

Update: 2016-05-10 14:49 GMT

ಮಂಜೇಶ್ವರ, ಮೇ 10: ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿ ವಾಮಂಜೂರು ಚೆಕ್‌ಪೋಸ್ಟ್ ಬಳಿ ರಿಕ್ಷಾಗಳು ಮುಖಾಮುಖಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಸಹಿತ ನಾಲ್ವರು ಗಾಯಗೊಂಡ ಘಟನೆ ಸೋಮವಾರ ಸಂಜೆ ಸಂಭವಿಸಿದೆ.

ಗಾಯಗೊಂಡವರನ್ನು ಮಳ್ಳಂಗೈಯ ಸುಹೈಲ್ (26) , ಝಪರುಲ್ಲಾ(22) , ಸೋಂಕಾಲಿನ ಫಾರೂಕ್, ವರ್ಕಾಡಿಯ ಹನೀಫ್ ಎಂದು ಗುರುತಿಸಲಾಗಿದೆ. ಗಾಯಗೊಂಡವರ ಪೈಕಿ ಸುಹೈಲ್‌ರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತಕ್ಕೊಳಗಾದ ರಿಕ್ಷಾಗಳೆರಡು ಸಂಪೂರ್ಣ ನಜ್ಜುಗುಜ್ಜಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News