‘ಮೇ 31ರವರೆಗೆ ಕೃಷಿ ಉದ್ದೇಶಕ್ಕೆ ನೀರು ಬಳಕೆ ಸ್ಥಗಿತ’

Update: 2016-05-13 18:17 GMT

ಮಂಗಳೂರು, ಮೇ 13: ಜಲಾಶಯ, ಡ್ಯಾಂ ಮೊದಲಾದ ನೀರಿನ ಮೂಲಗಳಿಂದ ಕೃಷಿ, ತೋಟಗಾರಿಕಾ ಬೆಳೆಗಳ ಉದ್ದೇಶಕ್ಕೆ ನೀರನ್ನು ತೆಗೆಯುವುದನ್ನು ನಿರ್ಬಂಧಿಸಿ ಹೊರಡಿಸಿರುವ ಆದೇಶವನ್ನು ಮೇ 31ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಆದೇಶವನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲೆಯ ಮೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶಿ ಸಲಾಗಿದೆ ಮತ್ತು ಸೂಕ್ತ ಭದ್ರತೆಯ ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆಯ ಸಹ ಕಾರದೊಂದಿಗೆ ಆದೇಶ ಜಾರಿಗೊಳಿಸಲು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News