ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ
Update: 2016-05-15 14:13 GMT
ಮಂಗಳೂರು, ಮೇ 15: ಹಿಂದೂ ಮಹಾಸಾಗರದಲ್ಲಿ ನಿಮ್ನ ಒತ್ತಡದ ಪರಿಣಾಮವಾಗಿ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿ.ಮೀ. ವೇಗದಲ್ಲಿ ತೀವ್ರ ಗಾಳಿಯು ಬೀಸಲಿದೆ.
ಸಮುದ್ರವು ಬಿರುಸಾಗಲಿರುವುದರಿಂದ ಮುಂದಿನ 48 ಗಂಟೆಗಳಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ಮೀನುಗಾರಿಕಾ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.