ದ.ಕ. ಜಿಲ್ಲಾ ಬಂದ್ಗೆ ಉತ್ತಮ ಬೆಂಬಲ: ಬೆಳ್ತಂಗಡಿಯಲ್ಲಿ ಕಾರಿಗೆ ಬೆಂಕಿ
Update: 2016-05-19 04:20 GMT
ಬೆಳ್ತಂಗಡಿ, ಮೇ 19: ಬೆಳ್ತಂಗಡಿ ತಾಲೂಕಿನಲ್ಲಿ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕಾಶಿಬೆಟ್ಟು ಸಮೀಪ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಅಲ್ಲಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ವಾಹನ ಸಂಚಾರಕ್ಕೆ ತಡೆ ಒಡ್ಡಲಾಗಿದೆ.
ಖಾಸಗಿ ಹಾಗೂ ಸರಕಾರಿ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿವೆ. ರಿಕ್ಷಾಗಳು ಸಂಚಾರ ಸ್ಥಗಿತಗೊಳಿಸಿದೆ. ಬೆಳ್ತಂಗಡಿ, ಉಜಿರೆ, ಗುರುವಾಯನಕೆರೆ ಸೇರಿದಂತೆ ಬಹುತೇಕ ಕಡೆ ಅಂಗಡಿಗಳು ಬಾಗಿಲು ತೆರೆದಿಲ್ಲ.ಜನ ಸಂಚಾರ ವಿರಳವಾಗಿದೆ.
ಬೆಳಗ್ಗಿನಿಂದಲೇ ತುಂತುರು ಮಳೆ ಆರಭಗೊಂಡಿದ್ದು ಜನರು ಮನೆಗಳಿಂದ ಹೊರಬರುವುದಕ್ಕೆ ಹಿಂಜರಿಯುತ್ತಿದ್ದಾರೆ.