ಮೂಡುಬಿದಿರೆ: ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ
Update: 2016-05-19 15:29 GMT
ಮೂಡುಬಿದಿರೆ, ಮೇ 19: ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಮೂಡುಬಿದಿರೆಯ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಗುರುವಾರ ಬೆಳಗ್ಗೆ ಪ್ರತಿಟನೆ ನಡೆಯಿತು.
ಮೂಡುಬಿದಿರೆ ಮುಖ್ಯರಸ್ತೆಯಲ್ಲಿರುವ ಶ್ರೀ ಹನುಮಂತ ದೇವಸ್ಥಾನದ ಬಳಿಯಿಂದ ಬಸ್ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.
ವಿಎಚ್ಪಿ ಕಾರ್ಯಾಧ್ಯಕ್ಷ ಶ್ಯಾಮ್ ಹೆಗ್ಡೆ, ಮುಖಂಡರಾದ ಸೋಮನಾಥ ಕೋಟ್ಯಾನ್, ನಾಗರಾಜ ಪೂಜಾರಿ, ಸುದರ್ಶನ್ ಎಂ, ಸಂತೋಷ್, ಭರತ್ ಶೆಟ್ಟಿ, ಗೋಪಾಲ ಶೆಟ್ಟಿಗಾರ್, ಅಜಯ್ ರೈ, ವಸಂತ ಪೈ ಮತ್ತಿತರ ಕಾರ್ಯಕರ್ತರು ಭಾಗವಹಿಸಿದ್ದರು.