ಕೇರಳ ಸಂಪುಟದಲ್ಲಿ ಕಾಸರಗೋಡು ಜಿಲ್ಲೆಗೆ ಸಚಿವ ಸ್ಥಾನ ಸಾಧ್ಯತೆ?
Update: 2016-05-20 13:30 GMT
ಕಾಸರಗೋಡು, ಮೇ 20: ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಸಚಿವ ಸಂಪುಟದಲ್ಲಿ ಕಾಸರಗೋಡಿಗೆ ಸಚಿವ ಸ್ಥಾನ ಲಭಿಸಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಕಾಞಂಗಾಡ್ ವಿಧಾನಸಭಾ ಕ್ಷೇತ್ರದಿಂದ ಎರಡನೆ ಬಾರಿ ಆಯ್ಕೆಯಾದ ಸಿಪಿಐನ ಇ.ಚಂದ್ರಶೇಖರನ್ರಿಗೆ ಸಚಿವ ಸ್ಥಾನ ಲಭಿಸಲಿದೆ ಎಂದು ಹೇಳಲಾಗುತ್ತಿದೆ.
ಚುನಾವಣೆಯಲ್ಲಿ ಕಾಞಂಗಾಡ್ ಕ್ಷೇತ್ರದಲ್ಲಿ ಇ.ಚಂದ್ರಶೇಖರನ್ 26,011 ಮತಗಳ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಸಚಿವ ಸ್ಥಾನ ಲಭಿಸಲಿದೆ ಎನ್ನಲಾಗುತ್ತಿದೆ. ಈ ಕುರಿತು ಎರಡು ದಿನಗಳಲ್ಲಿ ಅಂತಿಮ ತೀರ್ಮಾನ ಹೊರಬೀಳಲಿದೆ ಎನ್ನಲಾಗುತ್ತಿದೆ.
ಮೇ 25 ಅಥವಾ 26 ರಂದು ಪಿಣರಾಯಿ ವಿಜಯನ್ ನೇತೃತ್ವದ ಸಚಿವ ಸಂಪುಟ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.