ಉಡುಪಿ: 26 ದಿನಗೂಲಿ ಪೌರ ಕಾರ್ಮಿಕರ ಖಾಯಂ

Update: 2016-05-20 18:35 GMT

ಉಡುಪಿ, ಮೇ 20: ಜಿಲ್ಲೆಯ ಉಡುಪಿ ಮತ್ತು ಕುಂದಾಪುರದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 1996ರ ಎಪ್ರಿಲ್1ಕ್ಕೆ ಮೊದಲು ಕಾರ್ಯ ನಿರ್ವಹಿಸುತ್ತಿದ್ದ 26 ಮಂದಿ ನೌಕರರ ಸೇವೆಯನ್ನು ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಕ್ರಮಗೊಳಿಸಲಾಗಿದ್ದು, ಇಡೀ ರಾಜ್ಯದಲ್ಲಿ ಈ ರೀತಿ ಸಕ್ರಮೀಕರಣ ಮಾಡಿದ 2ನೆ ಜಿಲ್ಲೆ ಉಡುಪಿ ಎಂದು ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್. ತಿಳಿಸಿದ್ದಾರೆ.
 ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿಯ 15 ಮತ್ತು ಕುಂದಾಪುರದ 11 ಪೌರ ಕಾರ್ಮಿಕರಿಗೆ ಅವರ ಕೆಲಸ ಖಾಯ ಮಾತಿಯ ಆದೇಶ ಪತ್ರವನ್ನು ವಿತರಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಸನ್ನ, ಕುಂದಾಪುರ ಪುರಸಭೆಯ ಮುಖ್ಯಾ ಧಿಕಾರಿ ಗೋಪಾಲಕೃಷ್ಣ, ಇಂಜಿನಿಯರ್ ಕೃಷ್ಣ ಹೆಪ್ಸೂರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News