ನಾಳೆ ರಾಜ್ಯಮಟ್ಟದ ಮೊಗೇರ ಕ್ರೀಡೋತ್ಸವ
ಪಡುಬಿದ್ರೆ, ಮೇ 20: ಶ್ರೀ ಬ್ರಹ್ಮಮುಗ್ಗೇರ್ಕಳ ದೈವಸ್ಥಾನ ಮತ್ತು ಶ್ರೀಬ್ರಹ್ಮಮುಗ್ಗೇರ್ಕಳ ಸಾಂಸ್ಕೃತಿಕ ಅಧ್ಯಯನ ಮತ್ತು ಅಭಿವೃದ್ಧಿ ಕೇಂದ್ರದ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ ಮೊಗೇರ ಕ್ರೀಡೋತ್ಸವವು ಪಡುಬಿದ್ರೆ ಕಲ್ಲಟ್ಟೆಯ ಶ್ರೀ ಬ್ರಹ್ಮಮುಗ್ಗೇರ್ಕಳ ದೈವಸ್ಥಾನ ವಠಾರದಲ್ಲಿ ಮೇ 22ರಂದು ನಡೆಯಲಿದೆ.
ಅಂದು ಬೆಳಗ್ಗೆ 9ಕ್ಕೆ ನಡೆಯವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬ್ರಹ್ಮಮುಗ್ಗೇರ್ಕಳ ದೈವಸ್ಥಾನದ ಗುರಿಕಾರ ಪಿ.ವಿಠಲ್ ಕೋಟ್ಯಾನ್ ವಹಿಸುವರು. ಜ್ಯೋತಿಷ್ಯರಾದ ಉಷಾ ಮತ್ತು ವಿಶ್ವನಾಥ್ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಶ್ರೀ ಜಾರಂದಾಯ ಕ್ಷೇತ್ರದ ಗುತ್ತಿನಾರ್ ವಿಶುಕುಮಾರ್ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿಸುವರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಿ.ಬಿ.ರಾವ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಸಂಜೆ ಮೊಗೇರ ಸಂಘದ ರಾಜ್ಯಾಧ್ಯಕ್ಷ ಸುಂದರ ಮೇರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಸಿಂಡಿಕೇಟ್ ಸದಸ್ಯ ರಘು ಬೆಳ್ಳಿಪಾಡಿ ಬಹುಮಾನ ವಿತರಿಸುವರು ಎಂದು ಪ್ರಕಟನೆ ತಿಳಿಸಿದೆ.