ರಾಜ್ಯಸಭಾ ಚುನಾವಣೆ:ಮಹಾರಾಷ್ಟ್ರದಿಂದ ಪಿ.ಚಿದಂಬರಂ ನಾಮಪತ್ರ ಸಲ್ಲಿಕೆ

Update: 2016-05-31 13:19 GMT

ಮುಂಬೈ,ಮೇ 31:ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಮಹಾರಾಷ್ಟ್ರದಿಂದ ರಾಜ್ಯಸಭೆಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗಾಗಿ ಮಂಗಳವಾರ ತನ್ನ ನಾಮಪತ್ರ ಸಲ್ಲಿಸಿದರು.

 ರಾಜ್ಯದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ ಚವಾಣ್,ಎಂಪಿಸಿಸಿ ಅಧ್ಯಕ್ಷ ಅಶೋಕ ಚವಾಣ್, ಮಾಜಿ ಕೇಂದ್ರ ಗೃಹಸಚಿವ ಸುಶೀಲಕುಮಾರ ಶಿಂಧೆ, ರಾಜ್ಯ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಪಕ್ಷದ ಇತರ ನಾಯಕರೊಂದಿಗೆ ವಿಧಾನ ಭವನಕ್ಕೆ ಆಗಮಿಸಿದ ಚಿದಂಬರಂ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಅವರ ಪುತ್ರ ಕಾರ್ತಿ ಚಿದಂಬರಂ ಅವರೂ ಉಪಸ್ಥಿತರಿದ್ದರು.

 ಇದೇ ವೇಳೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಅವರೂ ರಾಜ್ಯಸಭಾ ಸ್ಥಾನಕ್ಕಾಗಿ ತನ್ನ ನಾಮಪತ್ರ ಸಲ್ಲಿಸಿದರು.

ಜೂ.11ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು. ಮಹಾರಾಷ್ಟ್ರದಿಂದ ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News