ಬಿಜೆಪಿ ಕಾರ್ಯಕರ್ತರ ಬಂಧನ

Update: 2016-06-05 18:22 GMT

ಸಂಭಾಲ್ (ಉತ್ತರ ಪ್ರದೇಶ), ಜೂ.5: ಮಥುರಾ ಘಟನೆಗೆ ಸಂಬಂಧಿಸಿದಂತೆ ಅಕ್ರಮ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಸುಮಾರು 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಸಮಾಜವಾದಿ ಪಕ್ಷದ ಮುಖಂಡ ಸಂಭಾಲ್ ಮುಹ್ಮದ್ ಅಖ್ತರ್ ನೀಡಿದ ದೂರಿನ ಮೇರೆಗೆ, ಮಾಳವೀಯ ಚೌಕ್ ಬಳಿ ನಿನ್ನೆ ಅಕ್ರಮವಾಗಿ ಗುಂಪು ಸೇರಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಕಮಲೇಶ್ ದೀಕ್ಷಿತ್ ಪ್ರಕಟಿಸಿದ್ದಾರೆ.

ಪ್ರತಿಭಟನೆ ವೇಳೆ ಅವರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪ್ರತಿಕೃತಿ ದಹಿಸಿದ್ದರು. ಜತೆಗೆ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಮಥುರಾ ಘಟನೆಗೆ ಸರಕಾರವೇ ಕಾರಣ ಎಂದು ದೂಷಿಸಿದ್ದರು ಎಂದು ದೀಕ್ಷಿತ್ ವಿವರಿಸಿದ್ದಾರೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 143ರ ಅನ್ವಯ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News