ಬಿಜೆಪಿ ಸಿದ್ಧಾಂತದ ಬಗ್ಗೆ ಪ್ರಶ್ನೆ ರಾಜಸ್ಥಾನ ವಿವಿಯಲ್ಲಿ ಪ್ರತಿಭಟನೆ
Update: 2016-06-06 18:15 GMT
ಜೈಪುರ, ಜೂ.6: ಸ್ನಾತಕೋತ್ತರ ಮಟ್ಟದ ಪರೀಕ್ಷೆಯಲ್ಲಿ ಬಿಜೆಪಿಯ ಸಿದ್ಧಾಂತಕ್ಕೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಕೇಳಿರುವ ವಿರುದ್ಧ ರಾಜಸ್ಥಾನ ವಿಶ್ವವಿದ್ಯಾನಿಲಯದಲ್ಲಿಂದು ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನಾಕಾರ ವಿದ್ಯಾರ್ಥಿಗಳ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಬೇಕಾಯಿತು.
ನ್ಯಾಶನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ(ಎನ್ಎಸ್ಯುಐ) ಸಂಯೋಜಿತ ವಿದ್ಯಾರ್ಥಿಗಳು ವಿವಿಯ ದ್ವಾರದ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾಗ ಅವರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು.
ಕನಿಷ್ಠ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆಂದು ಆರೋಪಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಪನ್ನು ಚದುರಿಸಲು ಲಘು ಲಾಠಿಚಾರ್ಜ್ ನಡೆಸಲಾಗಿದೆ. 11 ಮಂದಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.