ಉಡ್ತಾ ಪಂಜಾಬ್ ಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಗ್ರೀನ್ ಸಿಗ್ನಲ್
Update: 2016-06-13 12:36 GMT
ಮುಂಬೈ, ಜೂ.13: ವಿವಿಧ ಕಾರಣಗಳಿಂದ ಸುದ್ದಿಯಾಗಿರುವ ಶಾಹಿದ್ ಕಪೂರ್ ಮತ್ತು ಅಲಿಯಾ ಭಟ್ ನಟನೆಯ ‘ಉಡ್ತಾ ಪಂಜಾಬ್ ಚಿತ್ರದ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ನೀಡಿದೆ.
ಕೇಂದ್ರೀಯ ಚಲನಚಿತ್ರ ಸೆನ್ಸಾರ್ ಮಂಡಳಿಗೆ (ಸಿಬಿಎಫ್ಸಿ) ಚಲನಚಿತ್ರಗಳನ್ನು ಸೆನ್ಸಾರ್ ಮಾಡುವ ಅಧಿಕಾರ ಇಲ್ಲ ಎಂದು ತೀರ್ಪು ನೀಡಿದ್ದು,ಸಿನಿಮಾದಲ್ಲಿ ಮೂತ್ರ ಮಾಡುವ ದೃಶ್ಯವೊಂದನ್ನು ಮಾತ್ರ ಕಟ್ ಮಾಡುವಂತೆ ಬಾಂಬೆ ಹೈಕೋರ್ಟ್ ಚಿತ್ರ ನಿರ್ದೇಶಕರಿಗೆ ಸೂಚಿಸಿದೆ. ಇದರೊಂದಿಗೆ ಸೆನ್ಸಾರ್ ಮಂಡಳಿಯ ಸಿಬಿಎಫ್ಸಿ ಅಧ್ಯಕ್ಷರಾದ ಪಹ್ಲಾಜ್ ನಿಹಲಾನಿಗೆ ಮುಖಭಂಗವಾಗಿದೆ
ಉಡ್ತಾ ಪಂಜಾಬ್ ಚಿತ್ರದ 13 ದೃಶ್ಯಗಳಿಗೆ ಕತ್ತರಿ ಹಾಕಿ ಎ (ವಯಸ್ಕ) ಕೆಟಗೆರಿಯಲ್ಲಿ ಪ್ರಮಾಣ ಪತ್ರ ನೀಡಿ ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ಸಿಬಿಎಫ್ಸಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ ಸೋಮವಾರ ಹೇಳಿಕೆ ನೀಡಿದ್ದರು.