ಸ್ವಾಮಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ: ಬಿಜೆಪಿ ಸ್ಪಷ್ಟನೆ

Update: 2016-06-22 14:59 GMT

ಹೊಸದಿಲ್ಲಿ,ಜೂ.22: ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ವಿರುದ್ಧ ತನ್ನ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿಯವರ ಟೀಕೆಯನ್ನು ತಾನು ಒಪ್ಪುವುದಿಲ್ಲ ಎಂದು ಬುಧವಾರ ಇಲ್ಲಿ ಸ್ಪಷ್ಟಪಡಿಸಿದ ಬಿಜೆಪಿಯು, ಅದು ಸಂಪೂರ್ಣವಾಗಿ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಬಣ್ಣಿಸಿತು.

ಅರವಿಂದ ಸುಬ್ರಮಣಿಯವರನ್ನು ವಜಾಗೊಳಿಸುವಂತೆ ಸ್ವಾಮಿ ಆಗ್ರಹಿಸಿದ ಬಳಿಕ ಇಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಕಾಂತ ಶರ್ಮಾ ಅವರು ಈ ಸ್ಪಷ್ಟನೆಯನ್ನು ನೀಡಿದರು.

ಸ್ವಾಮಿ ಈ ಹಿಂದೆ ಆರ್‌ಬಿಐ ಗವರ್ನರ್ ರಘುರಾಮ ರಾಜನ್ ವಿರುದ್ಧವೂ ನಿರಂತರ ದಾಳಿ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News