ನೂತನ ಸಚಿವ ಪ್ರಮೋದ್‌ಗೆ ಸ್ವಾಗತ

Update: 2016-06-22 18:17 GMT

ಉಡುಪಿ, ಜೂ.22: ನೂತನ ಸಚಿವರಾಗಿ ಅಧಿಕಾರ ವಹಿಸಿದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ರಾಜ್ಯ ಮೀನುಗಾರಿಕಾ ಹಾಗೂ ಯುವ ಜನಸೇವೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್‌ರಿಗೆ ಬುಧವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ ಕೋರಲಾಯಿತು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ರಾಜ್ಯ ಸಾಬೂನು ಮತ್ತು ಮಾರ್ಜಕ ಮಂಡಳಿ ಅಧ್ಯಕ್ಷೆ ವರೋನಿಕಾ ಕರ್ನೆಲಿಯೊ, ಮಂಗಳೂರು ವಿವಿ ಸೆನೆಟ್ ಸದಸ್ಯ ಅಮೃತ್ ಶೆಣೈ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.
 ಈ ಸಂದರ್ಭ ಜಿಪಂ ಸದಸ್ಯ ಜರ್ನಾದನ ತೋನ್ಸೆ, ನಗರ ಸಭಾ ಸದಸ್ಯರಾದ ರಮೇಶ್ ಕಾಂಚನ್, ನಾರಾಯಣ ಪಿ.ಕುಂದರ್, ತಾಪಂ ಸದಸ್ಯೆ ಡಾ.ಸುನೀತಾ ಶೆಟ್ಟಿ, ಚಂದ್ರಿಕಾ ಶೆಟ್ಟಿ, ಯತೀಶ್ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News