ಜಾನುವಾರು ಸಾಗಾಟ: ಓರ್ವನ ಬಂಧನ

Update: 2016-06-25 17:46 GMT

ಮಂಗಳೂರು, ಜೂ. 25: ಟೆಂಪೋ ಟ್ರಾವೆಲರ್‌ನಲ್ಲಿ ಜಾನುವಾರ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ನಗರದ ಕದ್ರಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹಮೀದ್ ಜೋಕಟ್ಟೆ ಎಂದು ಗುರುತಿಸಲಾಗಿದೆ.

ಇಂದು ಮುಂಜಾನೆ 4 ಗಂಟೆಗೆವಾಹನದಲ್ಲಿ 17 ಜಾನುವಾರುಗಳನ್ನು ಅಮಾನವೀಯವಾಗಿ ಸಾಗಿಸುತ್ತಿದ್ದನೆಂದು ಹೇಳಲಾಗಿದ್ದು, ಪೊಲೀಸರು ವಾಹನ ಸಹಿತ ಜಾನುವಾರುಗಳನ್ನು ವಶಕ್ಕೆ ಪಡೆದು ಹಮೀದ್‌ನನ್ನು ಬಂಧಿಸಿದ್ದಾರೆ. ಈ ಬಗ್ಗೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News