ವಿಕಲಚೇತನರಿಗೆ ಆಧಾರ್ ಯೋಜನೆ

Update: 2016-06-25 18:21 GMT

ಉಡುಪಿ, ಜೂ.25: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀ ಕರಣ ಇಲಾಖೆಯಿಂದ ಉಡುಪಿ ಜಿಲ್ಲೆಯಲ್ಲಿ ವಿಕಲಚೇತನರು ಸ್ವ- ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುಕೂಲ ವಾಗುವಂತೆ 2016-17ನೆ ಸಾಲಿನ ‘ಆಧಾರ್’ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ 15,000 ರೂ. ವೌಲ್ಯದ ಗೂಡಂಗಡಿ ಹಾಗೂ 20,000 ರೂ. ಬಡ್ಡಿರಹಿತ ಸಾಲ ಸೌಲಭ್ಯ ನೀಡಲಾಗುತ್ತದೆ. ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ 12 ಸಾವಿರ ರೂ. ಹಾಗೂ ನಗರ ಪ್ರದೇಶದಲ್ಲಿ 24 ಸಾವಿರ ರೂ. ಮೀರಿರದ, ಶೇ.40ಕ್ಕಿಂತ ಹೆಚ್ಚು ವಿಕಲತೆ ಹೊಂದಿರುವ 18ರಿಂದ 55 ವರ್ಷದೊಳಗಿನ ನಿರುದ್ಯೋಗಿ ವಿಕಲಚೇತನರು ಜೂ.30ರೊಳಗೆ ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬ ಲೀಕರಣ ಅಧಿಕಾರಿಗೆ ಅರ್ಜಿ ಸಲ್ಲಿಸ ಬೇಕು. ಈ ಹಿಂದೆ ಆಧಾರ್ ಯೋಜನೆ ಗಾಗಿ ಅರ್ಜಿ ಸಲ್ಲಿಸಿ ಆಯ್ಕೆ ಯಾಗದ ಅರ್ಜಿದಾರರು ಸೂಕ್ತ ದಾಖಲೆಗಳೊಂದಿಗೆ 2016-17ನೆ ಸಾಲಿಗೆ ಹೊಸದಾಗಿ ಅರ್ಜಿ ಸಲ್ಲಿಸ ಬೇಕು. ಹೆಚ್ಚಿನ ಮಾಹಿತಿಗೆ ಇಲಾಖೆಯ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 0820-2574810 ಅಥವಾ 0820- 2574811ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News