ಎಸ್ಸಿಡಿಸಿಸಿ ಬ್ಯಾಂಕ್: ಉಪಾಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಆಯ್ಕೆ
ಮಂಗಳೂರು, ಜೂ.27: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ನ ಉಪಾಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎಸ್ಸಿಡಿಸಿಸಿ ಬ್ಯಾಂಕ್ನ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನದ ಉಳಿದ ಅವಧಿಗೆ ಇಂದು ಚುನಾವಣೆ ನಡೆಯಿತು. ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.ಅಶೋಕ್ ಚುನಾವಣಾಧಿಕಾರಿಯಾಗಿದ್ದರು.
ಉಪಾಧ್ಯಕ್ಷರಾಗಿ ಆಯ್ಕೆಯಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್ರನ್ನು ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ವಿನಯ ಕುಮಾರ್ ಸೂರಿಂಜೆ, ಬಿ. ನಿರಂಜನ್, ಟಿ.ಜಿ. ರಾಜರಾಮ್ ಭಟ್, ಎಂ. ವಾದಿರಾಜ ಶೆಟ್ಟಿ, ಭಾಸ್ಕರ್ ಎಸ್. ಕೋಟ್ಯಾನ್, ಬಿ. ರಘುರಾಮ ಶೆಟ್ಟಿ, ಎಸ್. ರಾಜು ಪೂಜಾರಿ, ಕೆ.ಎಸ್. ದೇವರಾಜ್, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಶಶಿಕುಮಾರ್ ರೈ, ಎಸ್.ಬಿ. ಜಯರಾಮ್ ರೈ, ಸಹಕಾರ ಸಂಘಗಳ ಉಪನಿಬಂಧಕರಾದ ಬಿ.ಕೆ. ಸಲೀಂ, ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ವಿಶ್ವನಾಥ ನಾಯರ್ ಉಪಸ್ಥಿತರಿದ್ದರು.