ನಿವೃತ್ತ ಸಿಬ್ಬಂದಿಗೆ ಬೀಳ್ಕೊಡುಗೆ

Update: 2016-07-03 18:23 GMT

ಉಡುಪಿ, ಜು.3: ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆಯ ಉಡುಪಿ ಅಭಿಯೋಜಕರ ಕಚೇರಿಯಲ್ಲಿ ಸೇವೆ ಸಲ್ಲಿಸಿದ ದ್ವಿತೀಯ ದರ್ಜೆ ಗುಮಾಸ್ತ ಎಸ್.ಪುಟ್ಟಣ್ಣರಿಗೆ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ಉಡುಪಿ ವಕೀಲರ ಸಂಘದ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಕಾನೂನು ಅಧಿಕಾರಿ (ಹಿರಿಯ) ಶಿವಪ್ರಸಾದ್ ಆಳ್ವ ಕೆ. ವಹಿಸಿದ್ದರು. ಅತಿಥಿಗಳಾಗಿ ಉಡುಪಿ ಜಿಲ್ಲೆಯ ಸರಕಾರಿ ಅಭಿಯೋಜಕ ಶೇಖರ ಶೆಟ್ಟಿ, ಉಡುಪಿ ವಕೀಲರ ಸಂಘದ ಅಧ್ಯಕ್ಷ ದಯಾನಂದ ಭಾಗವಹಿಸಿದ್ದರು. ಸಹಾಯಕ ಸರಕಾರಿ ಅಭಿಯೋಜಕ ಮಮ್ತಾಝ್ ಸ್ವಾಗತಿಸಿ, ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಪ್ರವೀಣ ಕುಮಾರ್ ವಂದಿಸಿದರು. ವಿಜಯ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News