ಕಾಶ್ಮೀರದಲ್ಲಿ ಈದ್ ಪ್ರಾರ್ಥನೆ ಬಳಿಕ ಘರ್ಷಣೆ, ಆರು ಮಂದಿಗೆ ಗಾಯ
Update: 2016-07-06 10:47 GMT
ಜಮ್ಮು-ಕಾಶ್ಮೀರ, ಜು.6: ಕಾಶ್ಮೀರ ಕಣಿವೆಯಲ್ಲಿ ಈದ್ ಪ್ರಾರ್ಥನೆಯ ಬಳಿಕ ಪ್ರತಿಭಟನಾಕಾರರು ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ನಡೆದ ಘರ್ಷಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಸಹಿತ ಆರು ಮಂದಿ ಗಾಯಗೊಂಡಿದ್ದಾರೆ.
ಅನಂತ್ನಾಗ್ ಜಿಲ್ಲೆಯ ಜಂಗ್ಲಟ್ ಮಂಡಿ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಹೆಚ್ಚುವರಿ ಎಸ್ಪಿ ಮುಬಾಶಿರ್ ಬುಖಾರಿಯ ಹೊಟ್ಟೆಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಹೊರವಲಯದ ಹೈದರ್ಪೋರ ಚೌಕ್ನಲ್ಲಿ ಪ್ರತಿಭಟನಾಕಾರರೊಂದಿಗೆ ನಡೆದ ಘರ್ಷಣೆಯಲ್ಲಿ ಕಾನ್ಸ್ಟೇಬಲ್ ಓರ್ವ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.