ತುಂಬೆ: 5ನೆ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Update: 2016-07-11 16:20 GMT

ಬಂಟ್ವಾಳ, ಜು. 11: ಪ್ರಾಥಮಿಕ ತರಗತಿಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಕಡಗೋಳಿ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

ಇಲ್ಲಿನ ನಿವಾಸಿ ಪ್ರಸಾದ್ ಮತ್ತು ಮಮತಾ ದಂಪತಿಯ ಪುತ್ರಿ ಪೂಜಾಶ್ರೀ(11) ಆತ್ಮಹತ್ಯೆಗೈದ ವಿದ್ಯಾರ್ಥಿನಿ.

ತುಂಬೆಯ ಖಾಸಗಿ ಶಾಲೆಯ 5ನೆ ತರಗತಿಯ ವಿದ್ಯಾರ್ಥಿನಿಯಾದ ಈಕೆ ಪರೀಕ್ಷೆಯ ಮುಗಿಸಿ ಇಂದು ಮಧ್ಯಾಹ್ನ ಶಾಲೆಯಿಂದ ಮನೆಗೆ ಬಂದಿದ್ದಳು ಎನ್ನಲಾಗಿದೆ. ಊಟ ಮಾಡಿದ ಬಳಿಕ ಮನೆಯ ಕೊಠಡಿಯ ಬಾಗಿಲು ಹಾಕಿ ಮಲಗಿದ್ದವಳು ಸಂಜೆ 6 ಗಂಟೆಯಾದರೂ ಕೊಠಡಿಯ ಬಾಗಿಲು ತೆರೆಯದ ಕಾರಣ ಸಂಶಯಗೊಂಡ ಮನೆಯವರು ಕೊಠಡಿಯ ಕಿಟಕಿ ಮೂಲಕ ನೋಡಿದಾಗ ಆಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News