ಜಿಲ್ಲಾ ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

Update: 2016-07-12 18:11 GMT

ಮಂಗಳೂರು, ಜು.12: ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಆರೋಗ್ಯ ವ್ಯವಸ್ಥೆ ಸುಧಾರಣೆ ಯೋಜನೆಯ ಎನ್‌ಸಿಡಿಪಿಸಿ ಕಾರ್ಯಕ್ರಮದಡಿ 2017ರ ತಿಂಗಳವರೆಗೆ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಎಂಬಿಬಿಎಸ್ ಅಥವಾ ಎಂಎಸ್‌ಡಬ್ಲು ಅಥವಾ ಸಾರ್ವಜನಿಕ ಆರೋಗ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಹೆಲ್ತ್ ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಪಿಜಿ ಡಿಪ್ಲೊಮಾ ಪಡೆದವರು ಅರ್ಜಿ ಸಲ್ಲಿಸಬಹುದು. ಆರೋಗ್ಯ/ಸುಧಾರಣಾ ಯೋಜನೆಗಳಲ್ಲಿ 2-3 ವರ್ಷ ಕಾರ್ಯನಿರ್ವಹಿಸಿ ಅನುಭವವುಳ್ಳ, ಉತ್ತಮ ಇಂಗ್ಲಿಷ್ ಮತ್ತು ಸ್ಥಳೀಯ ಭಾಷಾ ಜ್ಞ್ಞಾನವುಳ್ಳ, ಗಣಕಯಂತ್ರ ಪರಿಣಿತಿ ಹೊಂದಿರುವ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಜು.19ರಂದು ಅಪರಾಹ್ನ 3 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಇತರ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿಗಳ ಕಚೇರಿ, ಆರೋಗ್ಯ ಇಲಾಖೆ, ಲೋಕೋಪಯೋಗಿ ಕಟ್ಟಡ ಸಂಕೀರ್ಣ, ನೆಹರೂ ಮೈದಾನ ರಸ್ತೆ, ಮಂಗಳೂರು (ದೂ.ಸಂ:0824-2424501) ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News