ಸಚಿವ ಡಿಕೆಶಿ ಪ್ರವಾಸ

Update: 2016-07-15 18:36 GMT

ಮಂಗಳೂರು, ಜು.15: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಜು.16ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
 ಬೆಳಗ್ಗೆ 10ಕ್ಕೆ ಕರಾವಳಿ ವೃತ್ತದಿಂದ ಕಲೆಕ್ಟರ್ ಗೇಟಿನ ಮುಖ್ಯ ರಸ್ತೆಗೆ ಬ್ಲೆಸಿಯಸ್ ಎಂ.ಡಿಸೋಜರ ನಾಮಕರಣ ಉದ್ಘಾಟನಾ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು. ಅಪರಾಹ್ನ 3ಕ್ಕೆ ಮೆಸ್ಕಾಂ ಮತ್ತು ಕೆಪಿಟಿಸಿಎಲ್ ಸಿಬ್ಬಂದಿ ಹಾಗೂ ಅಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾತ್ರಿ 7:40ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News