ಟೆಂಪೊ ಢಿಕ್ಕಿ: ಪಾದಚಾರಿ ಮೃತ್ಯು

Update: 2016-07-15 18:39 GMT

ಕಾಪು, ಜು.19: ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆ ಗಣೇಶ್ ಸರ್ವಿಸ್ ಸ್ಟೇಷನ್ ಬಳಿ ಗುರುವಾರ ರಾತ್ರಿ ನಡೆದಿದೆ.
  ಕೋತಲಕಟ್ಟೆಯ ಸುಂದರ ಮೃತಪಟ್ಟವರು. ಇವರು ಕಾಪು ಕಡೆಯಿಂದ ಕೋತಲಕಟ್ಟೆ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಾಟಾ ಏಸ್ ಗೂಡ್ಸ್ ಟೆಂಪೊ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುಂದರ್‌ರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News