ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ
Update: 2016-07-15 18:40 GMT
ಮೂಡುಬಿದಿರೆ, ಜು.15: ಡಿವೈಎಸ್ಪಿಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಸರಕಾರ ಜನವಿರೋಧಿ ನಡೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮೂಡುಬಿದಿರೆ ಬಿಜೆಪಿ ನಗರ ಶಕ್ತಿ ಕೇಂದ್ರದ ವತಿಯಿಂದ ಶುಕ್ರವಾರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು. ದ.ಕ. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ., ಉಪಾಧ್ಯಕ್ಷ ಕೆ.ಪಿ.ಜಗದೀಶ ಅಧಿಕಾರಿ, ಪಕ್ಷದ ಹಿರಿಯರಾದ ಕೆ.ಆರ್.ಪಂಡಿತ್, ಮೂಡುಬಿದಿರೆ ಮಂಡಲ ಅಧ್ಯಕ್ಷ ಈಶ್ವರ ಕಟೀಲ್, ನಿಕಟಪೂರ್ವ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ನಾಗರಾಜ ಪೂಜಾರಿ, ಬಿಜೆಪಿ ಮುಖಂಡರಾದ ಕೃಷ್ಣರಾಜ ಹೆಗ್ಡೆ, ಯಶವಂತ ಶೆಟ್ಟಿ ಕರಿಂಜೆ, ನಗರ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ.ರಾಜೇಶ ಮಲ್ಯ, ಕಾರ್ಯದರ್ಶಿ ಹರೀಶ ಎಂ.ಕೆ. ಮತ್ತಿತರರು ಉಪಸ್ಥಿತರಿದ್ದರು.