ಮೂರು ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ

Update: 2016-07-18 08:26 GMT

ರೋಹ್ಟಕ್, ಜು.18: ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂರು ದಿನಗಳ ಹಿಂದೆ ಐವರು ಆರೋಪಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಲು ವಿಫಲರಾಗಿದ್ದಾರೆ.

 ಮೂರು ದಿನಗಳ ಹಿಂದೆ ಭಿವಾನಿಯಲ್ಲಿ ದಲಿತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಮೇಲ್ಚಾತಿಯ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಆರೋಪಿಗಳು 3 ವರ್ಷಗಳ ಹಿಂದೆಯೂ ಇದೇ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದರು.

ಕಾಲೇಜಿನಿಂದ ಮನೆಗೆ ವಾಪಸಾಗುತ್ತಿದ್ದಾಗ ಐವರು ಯುವಕರ ಗುಂಪು ತನ್ನನ್ನು ಅಪಹರಣ ಮಾಡಿದೆ. ಕಾರಿನೊಳಗೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾಗಿ ಸಂತೃಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು.

ಬುಧವಾರ ಯುವತಿ ಸುಖಪುರ ಚೌಕದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಬಟ್ಟೆ ಹರಿದುಹೋದ ಸ್ಥಿತಿಯಲ್ಲಿತ್ತು. ಸ್ಥಳೀಯರು ತಕ್ಷಣವೇ ಹತ್ತಿರದ ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದರು.

ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಅಮಿತ್, ವೌಸಮ್, ರಾಜು, ಆಕಾಶ್ ಹಾಗೂ ಸಂದೀಪ್ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ ಎಲ್ಲರೂ ಸ್ಥಳೀಯ ಯುವಕರಾಗಿದ್ದು, ತಲೆ ಮರೆಸಿಕೊಂಡಿದ್ದಾರೆ.

 ಐವರು ಆರೋಪಿಗಳ ಪೈಕಿ ಇಬ್ಬರನ್ನು 3 ವರ್ಷಗಳ ಹಿಂದೆ ಅತ್ಯಾಚಾರ ಆರೋಪದಲ್ಲಿ ಬಂಧಿಸಲಾಗಿತ್ತು.

ನಾವು ಪೊಲೀಸರ ರಕ್ಷಣೆಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪದೇ ಪದೇ ಬೇಡಿಕೆ ಸಲ್ಲಿಸಿದ್ದರೂ ಪೊಲೀಸರು ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ಸೇರಿಸಿಲ್ಲ ಎಂದು ಸಂತೃಸ್ತೆಯ ಸಹೋದರ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News