ಸಚಿವ ರಮಾನಾಥ ರೈ ಪ್ರವಾಸ

Update: 2016-07-22 18:48 GMT

ಮಂಗಳೂರು, ಜು.22: ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಜು.23ರಂದು ದ.ಕ. ಜಿಲ್ಲಾ ಪ್ರವಾಸದಲ್ಲಿ ರುವರು.
ಪೂರ್ವಾಹ್ನ 11ಕ್ಕೆೆ ತೊಕ್ಕೊಟ್ಟು ಪೆರ್ಮನ್ನೂರು ಸೈಂಟ್ ಸೆಬಾಸ್ಟಿಯನ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವ ಹಾಗೂ ಕೋಟಿ ವೃಕ್ಷ ಅಂದೋಲನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. 11:30ಕ್ಕೆ ಪೊಳಲಿ-ಮೊಡಂಕಾಪು ರಸ್ತೆ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಪರಾಹ್ನ 3ಕ್ಕೆ ಮಾರ್ನಬೈಲ್- ಸಾಲೆತ್ತೂರು-ವಿಟ್ಲ ಪಡ್ನೂರು ರಸ್ತೆ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News