ಇಂದು ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Update: 2016-07-22 18:49 GMT

ಉಡುಪಿ, ಜು.22: ಕರಾವಳಿ ಅಭಿವೃದ್ಧಿ ಪ್ರಾಕಾರದ ವಿವಿಧ ಯೋಜನಾ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವು ಜು.23ರಂದು ಉಡುಪಿ ಹಾಗೂ ಕಾರ್ಕಳ ತಾಲೂಕುಗಳಲ್ಲಿ ನಡೆಯಲಿವೆ. ಬೆಳಗ್ಗೆ 10:30ಕ್ಕೆ ಉಡುಪಿ ತಾಲೂಕಿನ ಆತ್ರಾಡಿ ಗ್ರಾಪಂ ವ್ಯಾಪ್ತಿಯ ಬಾಳ್ಕಟ್ಟ ಮತ್ತು ಬಾಳ್ಕಟ್ಟಬೀಡು ನಡುವೆ ಕಾಲುಸಂಕ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ, ಪೂ.11:30ಕ್ಕೆ ಬೈರಂಪಳ್ಳಿ ಗ್ರಾಪಂ ವ್ಯಾಪ್ತಿಯ 41ನೆ ಶಿರೂರು ಕೊಡ್ಸರಬೆಟ್ಟು ಕೃಷ್ಣ ನಾಯ್ಕರ ಮನೆ ಬಳಿ ಸಾರ್ವಜನಿಕ ತೋಡಿಗೆ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ, ಮಧ್ಯಾಹ್ನ 12:30ಕ್ಕೆ ಕಾರ್ಕಳ ತಾಲೂಕು ಮುಡಾರು ಗ್ರಾಪಂ ವ್ಯಾಪ್ತಿಯ ಬಜಗೋಳಿಯಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಸಮಾರಂಭ ನಡೆಯಲಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಕಾರದ ಕಾರ್ಯದರ್ಶಿಗಳ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News