ಮುಡೂರು: ಕಾರು-ಪಿಕಪ್ ಢಿಕ್ಕಿ

Update: 2016-07-24 18:28 GMT

ಸುಳ್ಯ, ಜು.24: ಸುಳ್ಯದಿಂದ ಕಾಸರಗೋಡು ಕಡೆಗೆ ಎ.ಕೆ.ಬಿ.ಬನಾನ ಸಂಸ್ಥೆಗೆ ಸೇರಿದ ಪಿಕಪ್ ವಾಹನ ಸುಳ್ಯದಿಂದ ಬಾಳೆಗೊನೆ ತುಂಬಿಕೊಂಡು ಕಾಸರಗೋಡು ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾಸರಗೋಡು ಕಡೆಯಿಂದ ಬರುತ್ತಿದ್ದ ಕಾರು ಮುಡೂರು ಬಳಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಪರಿಣಾಮ ಎರಡು ವಾಹನಗಳು ಜಖಂಗೊಂಡಿದೆ. ಚಾಲಕರು ಯಾವುದೇ ಪ್ರಾಣಪಾಯವಿಲ್ಲದೇ ಪಾರಾಗಿದ್ದಾರೆ. ಅಪಘಾತ: ದಂಪತಿಗೆ ಗಾಯ
 ಉಡುಪಿ, ಜು.24: ಉದ್ಯಾವರ ಬಲಾಯಿಪಾದೆ ಸಮೀಪದ ಜನತಾ ಟಯರ್ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಸಂಜೆ ಖಾಸಗಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಗಾಯಗೊಂಡ ಬಗ್ಗೆ ವರದಿಯಾಗಿದೆ.
ಗಾಯಗೊಂಡವರನ್ನು ಕೊರಂಗ್ರಪಾಡಿಯ ರಾಜೇಂದ್ರ ಪ್ರಸಾದ್(65) ಹಾಗೂ ಅವರ ಪತ್ನಿ ಲತಾ(56) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಮೂಕಾಂಬಿಕಾ ವೇಗದೂತ ಬಸ್ ಎದುರಿನಲ್ಲಿ ಬರುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆಯಿತು. ಇದರಿಂದ ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ. ಗಾಯಾಳುಗಳು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News