ಮಂಜೇಶ್ವರ: ವಿದ್ಯುತ್ ಆಘಾತದಿಂದ ಕಾಲೇಜು ವಿದ್ಯಾರ್ಥಿ ಮೃತ್ಯು
Update: 2016-07-30 12:33 GMT
ಮಂಜೇಶ್ವರ, ಜು.30: ಫ್ಯಾನ್ ದುರಸ್ತಿಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗಲಿ ಪದವಿ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಮಂಜೇಶ್ವರ ಸಮೀಪ ಬಡಾಜೆಯಲ್ಲಿ ನಡೆದಿದೆ.
ಬಡಾಜೆ ಶ್ರೀಮಹಾಲಿಂಗೇಶ್ವರ ಕ್ಷೇತ್ರ ಬಳಿಯ ನಿವಾಸಿ ನಾರಾಯಣ ಎಂಬವರ ಪುತ್ರ ಗುರುರಾಜ್(21)ಮೃತ ಯುವಕ. ಈತ ಕುದ್ರೋಳಿ ಗೋಕರ್ಣನಾಥೇಶ್ವರ ಕಾಲೇಜಿನ ಪದವಿ ವಿದ್ಯಾರ್ಥಿ.
ಶುಕ್ರವಾರ ರಾತ್ರಿ ಮನೆಯ ಫ್ಯಾನ್ ಕೆಟ್ಟಿದೆಯೆಂದು ದುರಸ್ತಿಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ತೊಕ್ಕೊಟ್ಟುವಿನ ಖಾಸಗಿ ಆಸ್ಪತ್ರೆಗೆ ಸಾಗಿದಲೆತ್ನಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ, ಸಹೋದರ ಸಹಿತ ಬಂಧುಗಳನ್ನು ಅಗಲಿದ್ದಾರೆ.