ವಿದ್ಯುತ್ ಗುತ್ತಿಗೆದಾರರ ಸಂಘದ ಸಭೆ

Update: 2016-07-31 18:25 GMT

ವಿಟ್ಲ, ಜು.31: ಕರ್ನಾಟಕ ರಾಜ್ಯದಿಂದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಬಂಟ್ವಾಳ ಉಪ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು.
ಸಂಘದ ಜಿಲ್ಲಾಧ್ಯಕ್ಷ ಉರ್ಬಾನ್ ಪಿಂಟೊ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಮೆಸ್ಕಾಂ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ಚಂದ್ರ ಕೆ.ವಿ. ಶುಭ ಹಾರೈಸಿದರು.
ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ಪುರಸಭಾ ಸದಸ್ಯ ಸದಾಶಿವ ಬಂಗೇರ ಅತಿಥಿಗಳಾಗಿದ್ದರು. ಸಂಘದ ನೂತನ ಅಧ್ಯಕ್ಷ ಸುಬ್ರಹ್ಮಣ್ಯ ರಾವ್, ಜಿಲ್ಲಾ ಕಾರ್ಯದರ್ಶಿ ಚೇತನ್ ಮಲ್ಯ, ಕೋಶಾಧಿಕಾರಿ ಪರಮೇಶ್ವರ, ಸಂಘಟನಾ ಕಾರ್ಯದರ್ಶಿ ಅಬ್ದುಸ್ಸಲಾಂ, ಸಹ ಕಾರ್ಯದರ್ಶಿ ಶ್ರೀಧರ ಗೌಡ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಎನ್.ಎ. ಯೂಸುಫ್ ಸ್ವಾಗತಿಸಿದರು. ಉಪಾಧ್ಯಕ್ಷ ಹಾಜಿ ಇಬ್ರಾಹೀಂ ಸೂಫಿ ವಂದಿಸಿದರು. ಟಿ. ಶೇಷಪ್ಪಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News