ಪೆರ್ನೆಯಲ್ಲಿ ಟ್ಯಾಂಕರ್ ಪಲ್ಟಿ

Update: 2016-08-01 12:44 GMT

ಉಪ್ಪಿನಂಗಡಿ,ಆ.1: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಬಿಳಿಮಾರು ಎಂಬಲ್ಲಿ ಅನಿಲ ಟ್ಯಾಂಕರ್ ಉರುಳಿ ಬಿದ್ದು ಸುಮಾರು 6 ಗಂಟೆಗಳ ಕಾಲ ಸಂಚಾರ ತಡೆ ಉಂಟಾದ ಘಟನೆ ಸೋಮವಾರ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಅಡುಗೆ ಅನಿಲ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿ ಬಿದ್ದಿತ್ತು. ಘಟನೆಯಿಂದ ಚಾಲಕ ತಮಿಳುನಾಡು ಮೂಲದ ಲೋಕಾನಂದ(32) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಇದರಿಂದಾಗಿ ಸುಮಾರು 6 ಗಂಟೆಗಳ ಕಾಲ ಈ ಭಾಗದಲ್ಲಿ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಟ್ಯಾಂಕರ್ ತೆರವುಗೊಳಿಸಿ ಸಂಚಾರ ವ್ಯವಸ್ಥೆ ಕಲ್ಪಿಸಲಾಯಿತು.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣೆಯ ಎಸ್‌ಐ ತಿಮ್ಮಪ್ಪ ನಾಯ್ಕಿ, ಗ್ರಾಮಾಂತರ ವೃತ್ತ ನಿರೀಕ್ಷಕ ಅನಿಲ್ ಕುಲಕರ್ಣಿ, ಸಂಚಾರಿ ಠಾಣೆಯ ಎಸ್‌ಐ ನಾಗರಾಜ್ ಸಹಿತ ಸಿಬ್ಬಂದಿಗಳು ಬಿಗಿ ಬಂದೋಬಸ್ತು ವ್ಯವಸ್ಥೆ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News