ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ದೇವಿಪ್ರಸಾದ್ ಶೆಟ್ಟಿ
Update: 2016-08-05 18:45 GMT
ಮಂಗಳೂರು, ಆ.5: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್ಸಿಡಿಸಿಸಿ ಬ್ಯಾಂಕ್)ಗೆ ವೃತ್ತಿಪರ ನಿರ್ದೇಶಕರನ್ನಾಗಿ ಡಾ.ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರನ್ನು ನಿಯುಕ್ತಿಗೊಳಿಸಲಾಗಿದೆ.
ಉದ್ದಿಮೆ, ವ್ಯಾಪಾರ ಕೃಷಿ ಕ್ರೀಡಾರಂಗ ಮತ್ತು ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿರುವ ಇವರು ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘ, ಬೆಳಪು ಗ್ರಾಪಂ ಹಾಗೂ ಯುನೈಟೆಡ್ ಮಲ್ಟಿ ಪರ್ಪಸ್ ಸೌಹಾರ್ದ ಕೋ-ಆಪರೇಟಿವ್ ಲಿ.ನ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲಿ ವಿಶೇಷವಾಗಿ ತೊಡಗಿಸಿಕೊಂಡಿರುವ ಅವರನ್ನು ಬ್ಯಾಂಕ್ನ ವೃತ್ತಿಪರ ನಿರ್ದೇಶಕರನ್ನಾಗಿ ನಿಯುಕ್ತಿಗೊಳಿಸಲಾಗಿದೆ ಎಂದು ಎಸ್ಸಿಡಿಸಿಸಿ ಬ್ಯಾಂಕ್ನ ಪ್ರಕಟನೆ ತಿಳಿಸಿದೆ.