ಮುಕ್ಕೂರು ಶಾಲಾ ಪರಿಸರ ಸ್ವಚ್ಛತೆ, ಗಿಡ ನೆಡುವ ಕಾರ್ಯಕ್ರಮ

Update: 2016-08-07 13:47 GMT

ಪುತ್ತೂರು,ಆ.7: ಸ್ವಚ್ಛತೆ ಮತ್ತು ಶಾಲಾ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮವು ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿ, ನೇಸರ ಯುವಕ ಮಂಡಲ ಮತ್ತು ಶಾಲಾ ಎಸ್‌ಡಿಎಂಸಿ ಸದಸ್ಯರ ಹಾಗೂ ಊರವರ ಸಹಕಾರದಲ್ಲಿ ಮುಕ್ಕೂರು ಶಾಲಾ ವಠಾರದಲ್ಲಿ ರವಿವಾರ ನಡೆಯಿತು.

ಆರಂಭದಲ್ಲಿ ಶಾಲಾ ಆವರಣದಲ್ಲಿನ ಪರಿಸರ ಶುಚಿತ್ವ ನಡೆಯಿತು. ಬಳಿಕ ಮೈದಾನದ ಬದಿಗಳಲ್ಲಿ ಗಿಡ ನೆಡುವ ಕಾರ್ಯ ನಡೆಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಚ್ ಮಹಮ್ಮದ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ವೆಂಕಟರಮಣ ಕುಂಡಡ್ಕ, ಮಾಜಿ ಅಧ್ಯಕ್ಷ ರಮೇಶ್ ಕುವೆತ್ತಡ್ಕ, ನೇಸರ ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಕುಂಡಡ್ಕ, ಉಪಾಧ್ಯಕ್ಷ ಪೂವಪ್ಪ ನಾಯ್ಕ ಅಡೀಲು, ಮುಕ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕ ಗುಡ್ಡಪ್ಪ ಗೌಡ, ಬೆಳ್ಳಾರೆ ಸಿಎ ಬ್ಯಾಂಕ್ ನಿರ್ದೇಶಕಿ ಗುಲಾಬಿ ರೈ, ಶಾಲಾ ಮುಖ್ಯಗುರು ಸೀತಾ.ವಿ., ಸಹ ಶಿಕ್ಷಕಿ ರಾಜೀವಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ಶಶಿಕಲಾ ರೈ ಪೂವಾಜೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News