ರೈಲಿನಡಿಗೆ ಬಿದ್ದು ಆತ್ಮಹತ್ಯೆ

Update: 2016-08-08 18:32 GMT

ಪಡುಬಿದ್ರಿ, ಆ.8: ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ರಾತ್ರಿ ನಂದಿಕೂರು ಗ್ರಾಮದ ಆನೆಡ್ಕ ಎಂಬಲ್ಲಿ ನಡೆದಿದೆ.
ಮೃತರನ್ನು ಆನೆಡ್ಕ ನಿವಾಸಿ ಆನಂದ ಪೂಜಾರಿ ಎಂಬವರ ಮಗ ನಿತಿನ್(25) ಎಂದು ಗುರುತಿಸಲಾಗಿದೆ. ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ನಿತಿನ್ ಜೀವನದಲ್ಲಿ ಜಿಗುಪ್ಸೆಗೊಂಡು ಮನೆ ಸಮೀಪ ಚಲಿಸುತ್ತಿದ್ದ ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News