ಎರ್ಮಾಳು: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

Update: 2016-08-10 05:48 GMT

ಮುಲ್ಕಿ, ಆ.10: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎರ್ಮಾಳಿನಲ್ಲಿ ಸಂಭವಿಸಿದೆ.

ಎರ್ಮಾಳು ದೇವಳದ ಬಳಿಯ ನಿವಾಸಿ ರಮೇಶ್ ಕುಂದರ್ (52) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಮನೆಯ ಮುಂಭಾಗದ ಕೊಟ್ಟಿಗೆಯಲ್ಲಿ ನೇಣುಬುಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ರಮೇಶ್ ವಿವಾಹಿತರಾಗಿದ್ದು, 10 ವರ್ಷದ ಹಿಂದೆ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News