ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳಿಗೆ ಮತ್ತೆ ಐದು ದಿನಗಳ ಪೊಲೀಸ್ ಕಸ್ಟಡಿ

Update: 2016-08-12 12:46 GMT

ಉಡುಪಿ, ಆ.12: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ರಾಜೇಶ್ವರಿ ಮತ್ತು ಆಕೆಯ ಪುತ್ರ ನವನೀತ್ ಶೆಟ್ಟಿಯನ್ನು ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ಮತ್ತೆ ಐದು ದಿನಗಳ ಕಸ್ಟಡಿ ವಿಧಿಸಿದೆ.

ಈ ಹಿಂದೆ ಪೊಲೀಸರು ಆರೋಪಿಗಳನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದರು. ಇಂದು ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಆ. 16ರವರೆಗೆ ಕಸ್ಟಡಿ ಮುಂದುವರಿಸಲಾಗಿದೆ.

ಪೊಲೀಸರು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲು ಕರೆತಂದಾಗ ಕೋರ್ಟ್ ಆವರಣದಲ್ಲಿ ಸಾರ್ವಜನಿಕರು ಆರೋಪಿಗಳಿಗೆ ಧಿಕ್ಕಾರ ಕೂಗಿದ ಘಟನೆಯೂ ನಡೆಯಿತು. ಸಾರ್ವಜನಿಕರು ಆರೋಪಿಗಳ ವಿರುದ್ಧ ಆಕ್ರೋಶಗೊಂಡು ಧಿಕ್ಕಾರ ಕೂಗಿದರು. ಪೊಲೀಸರ ಬಿಗಿ ಭದ್ರತೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ದು ವಾಪಸ್ ಕರೆದೊಯ್ಯಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News