ಯುವ ಕಾಂಗ್ರೆಸ್ ಮುಖಂಡ ತೇಜಸ್ವಿರಾಜ್ ಮೇಲೆ ಹಲ್ಲೆ
ಮಂಗಳೂರು, ಆ.15: ಯುವ ಕಾಂಗ್ರೆಸ್ ಮುಖಂಡ ತೇಜಸ್ವಿರಾಜ್ ಮೇಲೆ ಸಿಟಿ ಸೆಂಟರ್ನ ಸೆಕ್ಯುರಿಟಿ ಗಾರ್ಡ್ಗಳಿಬ್ಬರು ಹಲ್ಲೆ ನಡೆಸಿರುವ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತೇಜಸ್ವಿರಾಜ್ ಅವರು ತಮ್ಮ ಪತ್ನಿ ಸಮೇತರಾಗಿ ಸಿಟಿ ಸೆಂಟರ್ನ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಟ್ಗಳಿಗೆ ಸಂಬಂಧಿಸಿ ತೇಜಸ್ವಿರಾಜ್ ಮತ್ತು ಸಿಟಿ ಸೆಂಟರ್ನ ಸಿಬ್ಬಂದಿ ನಡುವೆ ಮಾತಿನ ಚಕಮಕಿ ಉಂಟಾಯಿತು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ತೇಜಸ್ವಿರಾಜ್ರವರು ಬ್ಯಾರಿಕೇಡ್ಗಳನ್ನು ತೆರವುಗೊಳಿಸುವಂತೆ ಸೆಕ್ಯುರಿಟಿ ಗಾರ್ಡ್ನವರಿಗೆ ಸೂಚಿಸಿದರೆನ್ನಲಾಗಿದ್ದು, ಇದರಿಂದ ಕುಪಿತರಾದ ಸಕ್ಯುರಿಟಿ ಗಾರ್ಡ್ಗಳಿಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಯಿಂದಾಗಿ ತೇಜಸ್ವಿರಾಜ್ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಶಾಸಕ ಲೋಬೊ ಭೇಟಿಹಲ್ಲೆಗೊಳಗಾದ ತೇಜಸ್ವಿರಾಜ್ ಅವರು ದಾಖಲಾಗಿರುವ ಆಸ್ಪತ್ರೆಗೆ ಶಾಸಕ ಜೆ.ಆರ್.ಲೋಬೊ ಭೇಟಿ ನೀಡಿದರು.