ಸ್ವಾತಂತ್ರ ಜಾಗೃತಿ ಪ್ರಗತಿ ರಥಕ್ಕೆ ಚಾಲನೆ

Update: 2016-08-15 18:54 GMT

ಮಂಗಳೂರು, ಆ.15: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಸಂಚರಿಸಲಿರುವ ಸ್ವಾತಂತ್ರ್ಯ ಜಾಗೃತಿ ಸಂದೇಶ ಸಾರುವ ‘ಪ್ರಗತಿ ರಥ’ ವಾಹನಕ್ಕೆ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹಸಿರು ನಿಶಾನೆ ತೋರಿದರು. ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಐವನ್ ಡಿಸೋಜ, ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್, ವಾರ್ತಾಧಿಕಾರಿ ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು. ‘ಸ್ವಾತಂತ್ರದಿಂದ ಸಾಮಾಜಿಕ ನ್ಯಾಯದೆಡೆಗೆ ನಮ್ಮ ಪಯಣ’ ಎಂಬ ಧ್ಯೇಯ ವಾಕ್ಯ ದೊಂದಿಗೆ ಈ ಪ್ರಗತಿರಥ ಸಂಚರಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News