ಕೌಶಲಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Update: 2016-08-16 18:52 GMT

ಉಡುಪಿ, ಆ.16: ಭಾರತ ಸರಕಾರದ ಕೌಶಲ ವಿಕಾಸ ಯೋಜನೆಯಡಿ ಯುವಕರಿಗೆ ಕೌಶಲ ಅಭಿವೃದ್ಧಿ ತರಬೇತಿಗಾಗಿ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉದ್ಯೋಗಗಳಿಗೆ ಸಂಬಂಧಿಸಿದಂತೆ ಕೌಶಲ ತರಬೇತಿ ನೀಡಿ ಯುವಕರನ್ನು ಉದ್ಯೋಗಕ್ಕೆ ಸಜ್ಜುಗೊಳಿಸುವುದು ಈ ಯೋಜನೆಯ ಮುಖ್ಯಉದ್ದೇಶವಾಗಿದೆ. ತರಬೇತಿ ಪಡೆದ ಯುವಕರಿಗೆ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುವುದು. ಉಡುಪಿಯಲ್ಲಿ ನಡಯುವ ಈ ತರಬೇತಿಗೆ ಡಿಪ್ಲೊಮಾ, ಬಿಸಿಎ, ಬಿಎಸ್‌ಸಿ ಪದವೀಧರರು ಈ ತರಬೇತಿಯಲ್ಲಿ ಭಾಗವಹಿಸಬಹುದು. ಆಸಕ್ತರು- ದೂ.ಸಂ:9448327884ನ್ನು ಸಂಪರ್ಕಿಸಬಹುದು. ಹೆಸರು ನೋಂದಣಿಗೆ ಆ.17 ಕೊನೆಯ ದಿನವಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News