ಎಬಿವಿಪಿ ವತಿಯಿಂದ ಪ್ರತಿಭಟನಾ ಮೆರವಣಿಗೆ

Update: 2016-08-17 13:02 GMT

ಮಂಗಳೂರು, ಆ.17: ಬೆಂಗಳೂರಿನ ಕಾಲೇಜೊಂದರಲ್ಲಿ ಭಾರತೀಯ ಸೇನೆಯ ವಿರುದ್ಧ ದೇಶವಿರೋಧಿ ಘೋಷಣೆ ಕೂಗಲಾಗಿದೆ ಹಾಗೂ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಸಾಗಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಜಗದೀಶ್‌ರಿಗೆ ಮನವಿ ಸಲ್ಲಿಸಿದರು. ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದ ಎಬಿವಿಪಿ ಮುಖಂಡ ಕೀರ್ತನ್ ಬೆಂಗಳೂರು ಮತ್ತು ದಿಲ್ಲಿಯಲ್ಲಿ ದೇಶವಿರೋಧಿ ಘೋಷಣೆ ಕೂಗಿದ ದೇಶದ್ರೋಹಿಗಳು ಬದುಕುಳಿದಿದ್ದಾರೆ. ಮಂಗಳೂರಿನಲ್ಲಿ ರಾಷ್ಟ್ರವಿರೋಧಿ ಘೋಷಣೆ ಕೂಗಿದರೆ ನಗರದ ವಿದ್ಯಾರ್ಥಿಗಳು ಸಿಡಿದೇಳುತ್ತಿದ್ದರು ಎಂದು ಹೇಳಿದರು.

ಪ್ರತಿಭಟನೆಯ ನೇತೃತ್ವವನ್ನು ಎಬಿವಿಪಿ ಮುಖಂಡರುಗಳಾದ ನವೀನ್, ಸುದೀಪ್ ಮೊದಲಾದವರು ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News