ನಾಳೆ ಎನ್ನೆಸ್ಯುಐ ವಿದ್ಯಾರ್ಥಿ ಸಮಾವೇಶ
Update: 2016-08-18 18:27 GMT
ಉಡುಪಿ, ಆ.18: ಬ್ರಹ್ಮಾವರ ಬ್ಲಾಕ್ ಎನ್ನೆಸ್ಯುಐ ವತಿಯಿಂದ ಬ್ಲಾಕ್ ಮಟ್ಟದ ಬೃಹತ್ ವಿದ್ಯಾರ್ಥಿ ಸಮಾವೇಶವನ್ನು ಆ.20ರಂದು ಬೆಳಗ್ಗೆ 10ಕ್ಕೆ ಬ್ರಹ್ಮಾವರ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಸಮಾವೇಶವನ್ನು ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಸಚಿವ ಯು.ಟಿ.ಖಾದರ್, ಎನ್ನೆಸ್ಯುಐ ರಾಜ್ಯಾಧ್ಯಕ್ಷ ಮಂಜುನಾಥ್, ಶಾಸಕರಾದ ಗೋಪಾಲ ಪೂಜಾರಿ, ವಿನಯ ಕುಮಾರ್ ಸೊರಕೆ, ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ಗೋಪಾಲ ಭಂಡಾರಿ ಮತ್ತಿತರರು ಭಾಗವಹಿಸಲಿರುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಅಲ್ತಾಫ್ ರಝಾಕ್, ಕುಲ್ದೀಪ್ ಶೆಟ್ಟಿ, ಹರೀಶ್ ಶೆಟ್ಟಿ, ಅಶ್ವಿನ್ ಗೋನ್ಸಾಲಿಸ್ ಉಪಸ್ಥಿತರಿದ್ದರು.