ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಮಹಾಸಭೆ

Update: 2016-08-21 15:36 GMT

ಮಂಗಳೂರು, ಆ. 21: ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ 35ನೆ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನೆಲ್ಸನ್ ಪಿರೇರಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಮಂಗಳೂರು ನಗರದಲ್ಲಿ ಸಂಚರಿಸುವ 350 ಸಿಟಿ ಬಸ್ಸುಗಳಲ್ಲಿ 2015-16ರ ಸಾಲಿನಲ್ಲಿ 4,267 ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಪಾಸುಗಳನ್ನು ನೀಡಿದ್ದು, ಇದರ ಸಬ್ಸಿಡಿ ಮೊತ್ತವು 36,93,926.30 ಆಗಿರುತ್ತದೆ. ಅಲ್ಲದೆ, ವಿಕಲಚೇತನರಿಗೆ, ಆರ್ಥಿಕವಾಗಿ ಹಿಂದುಳಿದವರಿಗೂ ಪೂರ್ಣ ಪ್ರಮಾಣದ ರಿಯಾಯತಿ ಪಾಸುಗಳನ್ನು ಸಂಘ ನೀಡಿದೆ ಎಂದು ಅವರು ಮಾಹಿತಿ ನೀಡಿದರು.

ಸಭೆಯಲ್ಲಿ 2016-17ನೆ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಜೀಝ್ ಪರ್ತಿಪ್ಪಾಡಿ, ಉಪಾಧ್ಯಕ್ಷರಾಗಿ ಬಿ.ಪಿ.ದಿವಾಕರ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕೃಷ್ಣ ಪುತ್ರನ್, ಜೊತೆ ಕಾರ್ಯದರ್ಶಿಯಾಗಿ ರಾಮಚಂದ್ರ ಪಿಲಾರ್, ಕೋಶಾಧಿಕಾರಿಯಾಗಿ ಸತೀಶ್ ತಲಪಾಡಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಅಲ್ಲದೆ, ಕಾರ್ಯಕಾರಿ ಸಮಿತಿಗೆ 44 ಸದಸ್ಯರನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News