ಉಪ್ಪಿನಂಗಡಿ: ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ - ದ್ವಿಚಕ್ರ ವಾರ ಗಂಭೀರ

Update: 2016-08-22 16:30 GMT

ಉಪ್ಪಿನಂಗಡಿ,ಆ.22: ದ್ವಿಚಕ್ರ ವಾಹನಕ್ಕೆ ಟ್ಯಾಂಕರೊಂದು ಡಿಕ್ಕಿಯಾದ ಪರಿಣಾಮ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದಿದೆ. ಅಪಘಾತವೆಸಗಿದ ಬಳಿಕ ಟ್ಯಾಂಕರ್ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.

ವಳಾಲ್ ಬಳಿಯ ಮಣಿಕ್ಕಳ ನಿವಾಸಿ ಯೊಗೀಶ್ (27) ಗಂಭೀರ ಗಾಯಗೊಂಡ ವ್ಯಕ್ತಿ. ಸೋಮವಾರ ರಾತ್ರಿ 7:45ರ ಸುಮಾರಿಗೆ ಈತ ಉಪ್ಪಿನಂಗಡಿ ಕಡೆಯಿಂದ ವಳಾಲ್ ಕಡೆಗೆ ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಹೊಟೇಲ್ ಆದಿತ್ಯ ಬಳಿ ತಲುಪುತ್ತಿದ್ದಂತೆಯೇ ಹಿಂಬದಿಯಿಂದ ಬಂದ ಟ್ಯಾಂಕರ್ ಈತ ಪ್ರಯಾಣಿಸುತ್ತಿದ್ದ ಹೋಂಡಾ ಆ್ಯಕ್ಟೀವಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆಗೆಸೆಯಲ್ಪ ಈತನ ತಲೆಗೆ ಗಂಭೀರ ಗಾಯವಾಗಿದೆ. ಸಾರ್ವಜನಿಕರು ಈತನ ಬಳಿ ತಲುಪುವಷ್ಟರಲ್ಲಿ ಅಪಘಾತವೆಸಗಿದ ಟ್ಯಾಂಕರ್ ಚಾಲಕ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ತಲೆಗೆ ಗಂಭೀರ ಗಾಯಗೊಂಡ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News