ಸಚಿವ ರಮಾನಾಥ ರೈ ದ.ಕ. ಪ್ರವಾಸ
Update: 2016-08-25 18:50 GMT
ಬಂಟ್ವಾಳ, ಆ.25: ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಆ.26ರಂದು ದ.ಕ. ಜಿಲ್ಲಾ ಪ್ರವಾಸದಲ್ಲಿರುವರು.
ಬೆಳಗ್ಗೆ 9:30ಕ್ಕೆ ಕಕ್ಯಪದವು ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗುವ ಪ್ರಾಥಮಿಕ ಶಾಲಾ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. 10:30ಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣ ದಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಆಶ್ರಯದಲ್ಲಿ ಇಲೆಕ್ಟ್ರಾನಿಕ್ ತ್ಯಾಜ್ಯಗಳ ಸಂಗ್ರಹಣಾ ಘಟಕಗಳ ಉದ್ಘಾಟನೆ ಮತ್ತು ಇಲೆಕ್ಟ್ರಾನಿಕ್ ತ್ಯಾಜ್ಯಗಳ ನಿರ್ವಹಣಾ ಕಾರ್ಯಾಗಾರದ ಉದ್ಘಾಟನಾ ಸಮಾರಂಭ, ಅಪರಾಹ್ನ 2ಕ್ಕೆ ಸಚಿವರ ಬಿ.ಸಿ.ರೋಡ್ ಕಚೇರಿಯಲ್ಲಿ ಪ್ರಾಕೃತಿಕ ವಿಕೋಪ ಪರಿಹಾರಧನದ ವಿತರಣೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ. ಸಂಜೆ 4ಕ್ಕೆ ನಮ್ಮ ಗ್ರಾಮ ನಮ್ಮ ರಸ್ತೆ ಕಾಮಗಾರಿ ವೀಕ್ಷಣೆ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.