ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ

Update: 2016-08-28 18:34 GMT

ಶಂಕರನಾರಾಯಣ, ಆ.28: ಸಿದ್ದಾಪುರ ಗ್ರಾಮದ ಕಡ್ರಿ ರಸ್ತೆಯ ನಿವಾಸಿ ಶಂಕರ ಕುಲಾಲ್ ಎಂಬವರ ಮಗಳು ಕಾವ್ಯಾ ಕುಲಾಲ್(16) ಗುರುವಾರ ಬೆಳಗ್ಗೆ ಶಂಕರನಾರಾಯಣ ಕಾಲೇಜಿಗೆ ಹೋಗುವುದಾಗಿ ಹೇಳಿ ಹೋದವರು ಮನೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಹಂದಾಡಿ ಭಂಡಾರಿ ಬೈಲು ನಿವಾಸಿ ಸುರೇಶ ಗಾಣಿಗ(45) ಎಂಬವರು ಆ.20ರಂದು ಬೆಳಗ್ಗೆ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News